ಗುರುಬ್ರಹ್ಮ ಗುರುರ್ವಿಷ್ಣು ಗುರುಃದೇವೋ ಮಹೇಶ್ವರಃ ಗುರುಸಾಕ್ಷಾತ್ ಪರಃ ಬ್ರಹ್ಮ ತಸ್ಮೈಶ್ರೀ ಗುರವೇ ನಮಃ…. ಮಗುವಿನ ಮನಸ್ಸು ಹಸಿ ಮಣ್ಣಿನಂತೆ. ಅದನ್ನು ಎರಡೂ ಕೈಗಳಿಂದ ಆದರದಿಂದ ತಟ್ಟಿ, ತಟ್ಟಿ ಸುಂದರವಾದ, ಕಲಾತ್ಮಕವಾದ ವಿಗ್ರಹ ರೂಪಿಸುವುದು ಗುರುವಿನ ಗುರಿ. ಗುರುವಿಲ್ಲದ ಗುರಿಯು ಕೂಡ ಸಾಧಿಸಲಸದಳ. ಅದಕ್ಕೇ ಹೇಳುವುದು ವಿದ್ಯೆಯು ದುಡ್ಡುಕೊಟ್ಟು ಖರೀದಿಸಬಲ್ಲ ಸೊತ್ತಲ್ಲ. ಅಥವಾ ವಿದ್ಯೆ ಎಂಬುದು ಮಾರಾಟದ ಸೊತ್ತೂ ಅಲ್ಲ. ವಿದ್ಯೆಯನ್ನಂತೂ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವೇ ಇಲ್ಲ ಬಾಲ್ಯದ ನೆನಪು ಈ ದಿನದಂದು ನಮಗೆ ಆಗ ಹಬ್ಬದ [...]